- Advertisement -
- Advertisement -
ಬಂಟ್ವಾಳ: ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ.
ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಕಾಣಿಸಿಕೊಂಡಿದ್ದು ಹಸಿ ಮರವೇ ಸುಟ್ಟು ಹೋಗಿದೆ.
ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
- Advertisement -