Thursday, April 25, 2024
spot_imgspot_img
spot_imgspot_img

ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ – ಬಾಲಕನನ್ನು ಬಲಿ ಪಡೆದ ನರಭಕ್ಷಕ ಹುಲಿ..!

- Advertisement -G L Acharya panikkar
- Advertisement -

ಮಡಿಕೇರಿ : ಕಾಫಿತೋಟಕ್ಕೆ ಸೌದೆ ತರಲು ತೆರಳುತ್ತಿದ್ದ ವೇಳೆಯಲ್ಲಿ ದಾಳಿ ನಡೆಸಿದ ಹುಲಿ ಬಾಲಕನೋರ್ವನನ್ನು ಕೊಂದು ಹಾಕಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯಲ್ಲಿ ನಡೆದಿದೆ.

ಕುಮಟೂರಿನ ಕೋಟ್ರಾಂಗಡ ಬಿದ್ದಪ್ಪ ಅವರ ತೋಟ ಕಾರ್ಮಿಕರಾಗಿರುವ ಪಣಿ ಎರವರ ಬಸವ ಅವರ ಪುತ್ರ ಅಯ್ಯಪ್ಪ (14) ಎಂಬ ಬಾಲಕ ಹುಲಿ ದಾಳಿಯಿಂದಾಗಿ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಕೋಟ್ರಾಂಗಡ ಅಶ್ವತ್ ಎಂಬವರ ಕಾಫಿ ತೋಟದಲ್ಲಿ ಸೌದೆಗಾಗಿ ತೆರಳಿದ ಸಂದರ್ಭದಲ್ಲಿ ತೋಟದಲ್ಲಿ ಎದುರಾದ ಹುಲಿವೊಂದು ಬಾಲಕನ ಮೇಲೆರಗಿ ದಾಳಿ ನಡೆಸಿದೆ.ಕಳೆದ ಹಲವು ಸಮಯಗಳಿಂದಲೂ ದಕ್ಷಿಣ ಕೊಡಗಿನಾದ್ಯಂತ ನಿರಂತರವಾಗಿ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ ಹುಲಿ ಇದೀಗ ನರಬಲಿ ಪಡೆದಿರೋದು ಜನರ ಆತಂಕಕ್ಕೆ ಕಾರಣವಾಗಿದೆ. ಹುಲಿದಾಳಿಗೆ ಬಾಲಕ ಬಲಿಯಾಗಿರುವ ಕುರುಹು ಪತ್ತೆಯಾಗಿದ್ದು, ಜನರು ಅರಣ್ಯ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

Related news

error: Content is protected !!