- Advertisement -
- Advertisement -
ಯಾದಗಿರಿ: ಕುಡುದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿ ಪಾದಚಾರಿಯೊಬ್ಬರನ್ನು ಸಾವನ್ನಪ್ಪಿದ್ದು ಚಾಲಕನನ್ನು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸಾಹಿಲ್ ಪಟೇಲ್ (18) ಎಂದು ಗುರುತಿಸಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಬೆಳಗಿನ ಜಾವ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಟಿಪ್ಪರ್ ಚಾಲಕ ಯದ್ವಾತದ್ವಾ ಟಿಪ್ಪರ್ ಚಲಾಯಿಸಿ ರಸ್ತೆ ಪಕ್ಕ ನಿಂತಿದ್ದ ಯುವಕನಿಗೆ ಗುದ್ದಿದ್ದಾನೆ. ಸಾಹಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂತರ ರಸ್ತೆ ಪಕ್ಕದಲ್ಲಿ ಇದ್ದ ಮರ, ಟ್ರಾಕ್ಟರ್ ಹಾಗೂ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದು, ಸ್ಥಳದಿಂದ ವೇಗವಾಗಿ ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಟಿಪ್ಪರ್ ಮೇಲೆ ಕಲ್ಲು ತೂರಾಟ ನಡೆಸಿ, ನಂತರ ಟಿಪ್ಪರ್ ಸಹಿತ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಟಿಪ್ಪರ್ ಚಾಲಕ ಜೀವನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -