Saturday, May 4, 2024
spot_imgspot_img
spot_imgspot_img

ಗಂಡನ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾದ ಹೆಂಡತಿ..!

- Advertisement -G L Acharya panikkar
- Advertisement -

ಗಂಡನ ಕಿರುಕುಳದಿಂದ ಮಹಿಳೆಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಸಹಳ್ಳಿ ನಿವಾಸಿ ಎಚ್.ಎಂ .ಮದುಸೂಧನ್ ಎಂಬವರ ಪತ್ನಿ ಕೆ.ಆಶಾ(34) ಮೃತರು ಎಂದು ಗುರುತಿಸಲಾಗಿದೆ. ಆಶಾ ಅವರು ಹೊಸಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ ಒಂಬತ್ತು ವರ್ಷಗಳ ಹಿಂದೆ ಮಧುಸೂಧನ್ ನನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗಳು ಆಗಾಗ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಹಲವು ಬಾರಿ ಹಿರಿಯರು ಸಂಧಾನ ನಡೆಸಿದ್ದರು. ಆದರೆ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ ಮಧುಸೂಧನ್ ಪತ್ನಿ ಆಶಾರನ್ನು ತವರು ಮನೆಯಿಂದ ಹಣ ಪಡೆದು ಬರುವಂತೆ ಕಿರುಕುಳ ನೀಡುತ್ತಿದ್ದನು. ಗಂಡನ ಕಿರುಕುಳ ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಸಹೋದರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!