- Advertisement -
- Advertisement -
ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿಯಾದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರದ ಮಲೆಯೂರು ಗ್ರಾಮದಿಂದ ಬಲಚವಾಡಿಯ ಮಂಜುನಾಥ್ ಗೆ ಕಳೆದ ಆರು ವರ್ಷದ ಹಿಂದೆ ರೂಪಾ ಜೊತೆಗೆ ವಿವಾಹವಾಗಿತ್ತು. ಆದರೆ ಮದುವೆಯಾದ ಬಳಿಕ ಮಂಜುನಾಥ್ ದಿನ ನಿತ್ಯ ಕುಡಿದು ಬಂದು ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ.
ಪತಿಯ ನಿರಂತರ ಕಿರುಕುಳದಿಂದ ಬೇಸತ್ತ ರೂಪಾ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಪತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -