- Advertisement -
- Advertisement -
ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ.
ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಯತ್ನ ಕಂಡ ಕೂಡಲೇ ಸ್ಥಳಿಯರು ಮತ್ತು ಆತನ ಸಹೋದ್ಯೋಗಿಗಳು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ಸ್ಥಳಕ್ಕಾಗಮಿಸಿದ ಹೊಸಕೋಟೆ ಪೋಲಿಸರು ಚಾಲಕನನ್ನು ಮನವೊಲಿಕೆ ಮಾಡಿ ಅಧಿಕಾರಿಗಳ ಜೊತೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -