Saturday, May 18, 2024
spot_imgspot_img
spot_imgspot_img

ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ..!

- Advertisement -G L Acharya panikkar
- Advertisement -

ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ್(47) ಮೃತ ರ್ದುದೈವಿ.

ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು ವಂಚಿಸಲಾಗಿದೆ ಎಂದು ನಟರಾಜ್ ಎಂಬಾತ ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದ. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್​ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾನೆ.

ಇನ್ನು ಮೃತ ನಾಗರಾಜ್ ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿದ್ದಾನೆ. ಡೆತ್​ನೋಟ್​ನಲ್ಲಿ ‘ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!