- Advertisement -
- Advertisement -
ಗಂಡ- ಹೆಂಡತಿ ಮಧ್ಯೆ ನಿತ್ಯ ಜಗಳದಿಂದ ಬೇಸತ್ತು ಯಾರೂ ಇಲ್ಲದ ಸಮಯದಲ್ಲಿ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹದಿನಾರು ಮೋಳೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಾದೇಶ್ (34) ಎಂದು ಗುರುತಿಸಲಾಗಿದೆ. ಮಾದೇಶ್ ಮತ್ತು ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತು ಹೋಗಿದ್ದ, ಜಗಳ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯತಿ ಮಾಡಲಾಗಿತ್ತು. ಆದರೂ ಗಂಡ-ಹೆಂಡತಿ ಜಗಳ ಮಾತ್ರ ಹಾಗೇ ನಡೆಯುತ್ತಲೇ ಇತ್ತು.
ಹೀಗಾಗಿ ಮನನೊಂದಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ನೇಣಿಗೆ ಕೊರೊಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲ್ಲ ಸೇರಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -