Friday, May 10, 2024
spot_imgspot_img
spot_imgspot_img

ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು.

ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ಇನ್ನು ವಿವಾಹ ವಾಗುವಂತೆ ಈತ ನಿರಂತರ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಕೋಟೆಗುಡ್ಡೆಯ ಅನ್ವರ್ (24) ಎಂಬಾತನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆತ್ಮಹತ್ಯೆ ಪ್ರೇರಣೆ ಮೊದಲಾದ ಮೊಕದ್ದಮೆ ಗಳ ನ್ನು ಹೂಡಲಾಗಿದೆ. ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಯುವತಿ ಯಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈತ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಆರೋಪಿ ಅನ್ವರ್ ಗೆ ಒತ್ತಾಸೆ ನೀಡಿದ್ದ ಇನ್ನಿಬ್ಬರ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿದೆ. ಬದಿಯಡ್ಕ ಪೊಲೀಸರು ಮಹಜರು ನಡೆಸಿದ್ದಾರೆ.

- Advertisement -

Related news

error: Content is protected !!