- Advertisement -
- Advertisement -
ಬೈಕ್ಗೆ ನಗರಸಭೆ ವಾಹನ ಬಡಿದು ಶಿಕ್ಷಕಿ ಮೃತಪಟ್ಟಿರುವ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟ ಶಿಕ್ಷಕಿ ಮಾಸ್ತೆಪ್ಪ ಭೋವಿ (40) ಎಂದು ಗುರುತಿಸಲಾಗಿದೆ.
ವಿಜಯಾ ಅವರು ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜತೆಗೆ ವಿಜಯಾ ಅವರು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ಗೆ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಬಡಿದಿದೆ. ಈ ವೇಳೆ ಕೆಳಗೆ ಬಿದ್ದ ಶಿಕ್ಷಕಿ ವಿಜಯಾ ಅವರ ತಲೆ ಮೇಲೆ ಟ್ರಕ್ ಹತ್ತಿದೆ. ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಾ ಪತಿಗೂ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -