Saturday, June 28, 2025
spot_imgspot_img
spot_imgspot_img

BSY ರಾಜೀನಾಮೆಗೆ ಕೌಂಟ್‌ಡೌನ್; ಇಂದೇ ಬರಲಿದೆ ಹೈಕಮಾಂಡ್‌ನಿಂದ ಸಂದೇಶ

- Advertisement -
- Advertisement -

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಸುದ್ದಿ, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ವರಿಷ್ಠರ ಸಂದೇಶ ವಿಚಾರವಾಗಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ. ಬಂದ ಕೂಡಲೇ ತಿಳಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ ಮಠಾಧೀಶರ ಬೃಹತ್ ಸಮಾವೇಶದ ಬಗ್ಗೆಯೂ ಯಾವುದೇ ಹೇಳಿಕೆ ನೀಡಿದ ಸಿಎಂ, ದಲಿತ ಸಿಎಂ ಬಗ್ಗೆ ನಾನಲ್ಲ ಹೈಕಮಾಂಡ್ ನಿರ್ಧಾರ ಮಾಡುತ್ತೇನೆ ಎಂದರು. ಭಾರಿ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅನಾಹುತ ಸಂಭವಿಸಿದೆ. ಬೆಳಗಾವಿಯಲ್ಲಿ ಅತಿ ಹೆಚ್ಚು ತೊಂದರೆಯಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚು ಹಾನಿಯಾಗಿರುವ ಪ್ರದೇಶಗಳಿಗೆ ತೆರಳಿ ಪರಿಶೀಲಿಸುತ್ತೇನೆ. ಸ್ಥಳಾಂತರಗೊAಡಿರುವ ಜನರನ್ನು ಭೇಟಿಯಾಗಿ ಸಮಸ್ಯೆ ಆಲಿಸುತ್ತೇನೆ. ನಿನ್ನೆಯಿಂದ ಮಳೆ ಕೊಂಚ ಕಡಿಮೆಯಾಗಿದ್ದು, ಇನ್ನೂ 2-3 ದಿನಗಳ ವರೆಗೆ ಮಳೆ ಹೀಗೆ ಕಡಿಮೆಯಾದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಿದರು.

- Advertisement -

Related news

error: Content is protected !!