ಸ್ಯಾಂಡಲ್ವುಡ್ ನಟಿ ಸವಿ ಮಾದಪ್ಪ (ಸೌಜನ್ಯ) ಅವರು ಸೆಪ್ಟೆಂಬರ್ 30ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಇದಾದ ಬೆನ್ನಲ್ಲೇ ಟಾಲಿವುಡ್ನಲ್ಲೂ ಒಂದು ಆತ್ಮಹತ್ಯೆ ನಡೆದಿದೆ. ತೆಲುಗಿನ ಜ್ಯೂನಿಯರ್ ಆರ್ಟಿಸ್ಟ್ ಅನುರಾಧಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೈದರಾಬಾದ್ನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲೇ ಅನುರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅನುರಾಧಾ ಮನೆಯಿಂದ ಹೊರಗೆ ಬಂದಿರಲಿಲ್ಲ. ಇದು ನೆರೆಹೊರೆಯವರಿಗೆ ಅನುಮಾನ ಮೂಡಿಸಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಪೊಲೀಸರು ಮನೆಗೆ ಬಂದು ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಅನುರಾಧಾ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅನುರಾಧಾ ಅವರು ಕಿರಣ್ ಎಂಬುವವರನ್ನು ಪ್ರೀತಿಸುತ್ತಿದ್ದರು. ಅವರು ಅನುರಾಧಾಗೆ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದರು. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನುರಾಧಾ ಅವರು ತೆಲುಗು ಇಂಡಸ್ಟ್ರಿಯಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ಕಿರಣ್ ಕೂಡ ಸಿನಿಮಾ ಇಂಡಸ್ಟ್ರಿಯಲ್ಲೇ ಕೆಲಸ ಮಾಡಿಕೊಂಡಿದ್ದರು. ಆರು ವರ್ಷದ ಹಿಂದೆ ಇಬ್ಬರ ಪರಿಚಯವಾಗಿತ್ತು. ಶೀಘ್ರವೇ ಮದುವೆ ಆಗಲು ಇಬ್ಬರೂ ನಿರ್ಧರಿಸಿದ್ದರು. ಆದರೆ, ಕಿರಣ್ ಸಂಬಂಧ ಮುರಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಇದರಿಂದ ಅನುರಾಧಾ ಖಿನ್ನತೆಗೆ ಒಳಗಾದರು. ಈಗ ಅವರು ಆತ್ಮಹತ್ಯೆ ಮಾಡಿಕೊಂಡು ಜೀವವನ್ನೇ ತೆಗೆದುಕೊಂಡಿದ್ದಾರೆ. ಸದ್ಯ, ಕಿರಣ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.