Sunday, May 19, 2024
spot_imgspot_img
spot_imgspot_img

ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಬರಲಿರುವ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥಿವ ಶರೀರ

- Advertisement -G L Acharya panikkar
- Advertisement -

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಇಂದು ಮೃತಪಟ್ಟಿದ್ದು ,   ಪಾರ್ಥಿವ ಶರೀರ ನಾಳೆ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಆಗಮಿಸಲಿದೆ ಎಂದು ತಿಳಿದುಬಂದಿದೆ.

ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ  ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್ ರಾಘವೇಂದ್ರ ಮದುವೆಯಾಗಿದ್ದರು. ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು ಅವರು 26 ಆಗಸ್ಟ್ 2007 ರಂದು ಪ್ರೀತಿಸಿ ಮದುವೆಯಾಗಿದ್ದರು.

- Advertisement -

Related news

error: Content is protected !!