- Advertisement -
- Advertisement -
ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಸದಸ್ಯರಾದ ಪರಶುರಾಮ, ರುಕ್ಕಿಣಿ, ಧೀರಜ್, ಅಕ್ಷರ, ಖುಷಿ, ದೀಪಿಕಾ, ನಂದ ಕಿಶೋರ ಹಾಗೂ ಪಿಂಡ ಪ್ರಧಾನಕ್ಕೆ ಬಂದಿದ್ದ ಹುಬ್ಬಳ್ಳಿಯ ಎಲ್ ವಿ ಪಾಟೀಲ್ ಅವರು ಸಮುದ್ರದಲ್ಲಿ ಮುಳುಗಡೆಯಾಗಿದ್ದರು
ಇದನ್ನು ನೋಡಿದ ಕೂಡಲೇ ಲೈಪ್ ಗಾರ್ಡ್ ಸಿಬ್ಬಂದಿಗಳು ಸಮುದ್ರಕ್ಕೀಳಿದು ರಕ್ಷಣೆ ಮಾಡಿದ್ದಾರೆ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
- Advertisement -