Saturday, April 27, 2024
spot_imgspot_img
spot_imgspot_img

ಕೇರಳದಲ್ಲಿ ತೌಕ್ತೆ ಸೈಕ್ಲೋನ್ ಅಬ್ಬರ, ಇಂದು ಕರ್ನಾಟಕಕ್ಕೆ ಅಪ್ಪಳಿಸಲಿರುವ ಚಂಡಮಾರುತ: ದ.ಕ, ಉಡುಪಿ, ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ!

- Advertisement -G L Acharya panikkar
- Advertisement -

ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದ ಅಬ್ಬರ ಕೇರಳದಲ್ಲಿ ಜೋರಾಗಿದೆ. ಇದರಿಂದ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ 9 ಎನ್​ಡಿಆರ್​​​ಎಫ್​​ ತಂಡಗಳು ಕೇರಳಕ್ಕೆ ದೌಡಾಯಿಸಿವೆ. ಇನ್ನು ತೌಕ್ತೆ ಚಂಡಮಾರುತ ಇಂದು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದ್ದು, ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ದಕ್ಷಿಣ ಕನ್ನಡದಲ್ಲೂ ಎಚ್ಚರದಿಂದಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

- Advertisement -

Related news

error: Content is protected !!