- Advertisement -
- Advertisement -
ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದ ಅಬ್ಬರ ಕೇರಳದಲ್ಲಿ ಜೋರಾಗಿದೆ. ಇದರಿಂದ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ 9 ಎನ್ಡಿಆರ್ಎಫ್ ತಂಡಗಳು ಕೇರಳಕ್ಕೆ ದೌಡಾಯಿಸಿವೆ. ಇನ್ನು ತೌಕ್ತೆ ಚಂಡಮಾರುತ ಇಂದು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದ್ದು, ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ದಕ್ಷಿಣ ಕನ್ನಡದಲ್ಲೂ ಎಚ್ಚರದಿಂದಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- Advertisement -