- Advertisement -
- Advertisement -
ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ವನಗೂರು ಸಮೀಪದ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ.
ಕುಣಿಕೇರಿ ಬಸವರಾಜು-ಬೇಬಿ ದಂಪತಿಯ ಒಬ್ಬಳೇ ಪುತ್ರಿ ನಾಲ್ಕನೇ ತರಗತಿ ಓದುತ್ತಿದ್ದ ಸಾನಿತಾ(9) ಮೃತಪಟ್ಟ ಬಾಲಕಿ. ಶಾಲೆಗೆ ರಜೆಯಿದ್ದ ಕಾರಣ ಮನೆಯೊಳಗೆ ಸೀರೆ ಕಟ್ಟಿಕೊಂಡು ಜೋಕಾಲಿ ಆಡುತ್ತಿದ್ದಳು, ಈ ವೇಳೆ ಆಯತಪ್ಪಿ ಸಾನಿತಾ ಕುತ್ತಿಗೆಗೆ ಸೀರೆ ಬಿಗಿದು ಸಾವನ್ನಪ್ಪಿದ್ದಾಳೆ.
ಈ ಹಿಂದೆಯೂ ರಜಾ ದಿನಗಳಲ್ಲಿ ಮನೆಯಲ್ಲಿನ ಸೀರೆ ಬಳಸಿ ಜೋಕಾಲಿ ಮಾಡಿಕೊಂಡು ಸಾನಿತಾ ಆಟವಾಡುತ್ತಿದ್ದಳು. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡರು.
- Advertisement -