Monday, April 29, 2024
spot_imgspot_img
spot_imgspot_img

ಮಂಗಳೂರು: ಕುಖ್ಯಾತ ರೌಡಿ ಸಿಸಿಬಿ ಪೊಲೀಸರ ಬಲೆಗೆ

- Advertisement -G L Acharya panikkar
- Advertisement -

ಮಂಗಳೂರು: ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಣ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಡೀಲ್ ಫೈಸಲ್ ನಗರನಿವಾಸಿ ತಲ್ಲತ್ ಬಂಧಿತ ವ್ಯಕ್ತಿ. ಗೋವಾ, ಮುಂಬೈನಲ್ಲಿದ್ದುಕೊಂಡೇ ರೌಡಿಸಂ ಲೋಕವನ್ನು ನಿಯಂತ್ರಿಸುತ್ತಿದ್ದ . ತಲ್ಲತ್‌ ಗ್ಯಾಂಗ್‌ ಲೀಡರ್‌ ಆಗಿದ್ದ ಎನ್ನಲಾಗಿದೆ. ಕಳೆದ 20 ವರ್ಷಗಳಿಂದ ತಲ್ಲತ್ ಮಂಗಳೂರಿನಲ್ಲಿ ಅಪರಾಧ ಎದುರಿಸುತ್ತಿದ್ದಾನೆ.

ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ.

ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ

- Advertisement -

Related news

error: Content is protected !!