Thursday, March 28, 2024
spot_imgspot_img
spot_imgspot_img

ಹುಂಡಿ ಕದಿಯಲು ಬಂದವರಿಂದ ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ.!

- Advertisement -G L Acharya panikkar
- Advertisement -

ಮಂಡ್ಯ: ದೇವಾಲಯದ ಹುಂಡಿ ಕಳವಿಗೆ ಬಂದ ದುಷ್ಕರ್ಮಿಗಳು ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ  ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ದೇವಾಲಯದ ಅರ್ಚಕರಾದ ಗಣೇಶ(55), ಪ್ರಕಾಶ(58) ಮತ್ತು ಆನಂದ(40) ಕೊಲೆಯಾದವರು.ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಇವರು ಅರ್ಚಕ ವೃತ್ತಿಯ ಜೊತೆಗೆ ರಾತ್ರಿ ಪಾಳಿಯಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ದುಷ್ಕರ್ಮಿಗಳು ಮೂವರನ್ನು ದೇವಾಲಯದ ಆವರಣದಲ್ಲೇ ಕೊಲೆ ಮಾಡಿ, ಕಾಣಿಕೆಯ ಹುಂಡಿಯನ್ನು ಹೊತ್ತೊಯ್ದು ಹಣದ ಜೊತೆ ಚಿನ್ನ-ಬೆಳ್ಳಿಯ ಆಭರಣವನ್ನೂ ದೋಚಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಶಾಸಕ ಎಂ.ಶ್ರೀನಿವಾಸ್, ತಹಶಿಲ್ದಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!