Friday, June 27, 2025
spot_imgspot_img
spot_imgspot_img

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಹ ಸಂಸ್ಥೆ ನ್ಯೂಸ್ ಪುತ್ತೂರು ನೂತನ ಕಚೇರಿ ಉದ್ಘಾಟನೆ

- Advertisement -
- Advertisement -

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಹ ಸಂಸ್ಥೆಯಾದ ನ್ಯೂಸ್ ಪುತ್ತೂರು ನೂತನ ಕಚೇರಿ ಸೆಪ್ಟೆಂಬರ್ 9 ರಂದು ಪುತ್ತೂರು ಏಲ್ಮುಡಿಯಲ್ಲಿರುವ ಪ್ರಾವಿಡೆನ್ಸ್ ಪ್ಲಾಝ ಕಟ್ಟಡದ 3 ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ಮಾಜಿ ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಿ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ಆಡಳಿತ ಮಂಡಳಿ ಅಧ್ಯಕ್ಷ ಕೆ ರಾಜೇಂದ್ರ ಪ್ರಸಾದ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಸಂಸ್ಥೆಗಳ ನಿರ್ದೇಶಕರು ಜಯಂತ ನಡುಬೈಲು, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರು ತಿಲಕ್ ರೈ ಕುತ್ಯಾಡಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರು ರಾಮ್ ದಾಸ್ ಶೆಟ್ಟಿ,ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಚಿದಾನಂದ ಬೈಲಾಡಿ, ಉಜ್ಜೀವನ್ ಬ್ಯಾಂಕ್ ಮೈಸೂರು ಇದರ ಕ್ಲಸ್ಟರ್ ಮ್ಯಾನೇಜರ್ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ನಾಗೇಶ್ ಕಡೆಂಜೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸೀತಾರಾಮ ಕೇವಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಪ್ರೇರಣಾ ಸಂಸ್ಥೆಯಿಂದ ತರಭೇತಿ ಪಡೆದು ಸಿಎ ಪರೀಕ್ಷೆಯಲ್ಲಿ ಪ್ರಥಮ ಅವಧಿಯಲ್ಲೇ ಅತ್ಯಂತ ಹೆಚ್ಚು ಅಂಕದೊಂದಿಗೆ ತೇರ್ಗಡೆ ಹೊಂದಿದ ಆರ್ಯಾಪು ಗ್ರಾಮದ ಸಿಮ್ರಾನ್ ತಾಜ್, ಹಾಗೂ ಕೊಳ್ತಿಗೆ ಗ್ರಾಮದ ಪಾಂಬಾರು ಸ್ಮಿತಾ ಎಸ್ ರೈ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪ್ರೇರಣಾ ಸಂಸ್ಥೆಯಿಂದ ಸುಮಾರು 60 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಿದರು.

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಕೇಶವ ಅಮೈ ಕಲಾಯಿಗುತ್ತು ಸ್ವಾಗತಿಸಿ, ನಿರ್ದೇಶಕ ವಸಂತ ವೀರಮಂಗಲ ವಂದಿಸಿದರು.

- Advertisement -

Related news

error: Content is protected !!