- Advertisement -
- Advertisement -
ಟಿಟಿ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಕಲ್ಲಹಳ್ಳಿ ಅರಣ್ಯದ ಬಳಿ ಅಪಘಾತ ನಡೆದಿದೆ. ಬೈಕ್ ಸವಾರ ಶರತ್ (20) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ವೀರೇಶ್ (20) ಸ್ಥಿತಿ ಚಿಂತಾಜನಕವಾಗಿದೆ.
ಸುರಪುರ ಗ್ರಾಮದವರಾದ ಶರತ್ ಮತ್ತು ವೀರೇಶ್ ಸ್ಪ್ಲೆಂಡರ್ ಬೈಕ್ನಲ್ಲಿ ಬೇಲೂರಿನಿಂದ ಹಳೇಬೀಡು ಕಡೆಗೆ ಬರುತ್ತಿದ್ದರು. ಈ ಸಂದರ್ಭ ಹಳೇಬೀಡಿನಿಂದ ಬೇಲೂರು ಕಡೆಗೆ ಬರುತ್ತಿದ್ದ ಟಿಟಿ ವಾಹನ ಕಲ್ಲಹಳ್ಳಿ ಗ್ರಾಮದ ಬಳಿ ಬೈಕ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಘಟನೆ ಪರಿಣಾಮ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ವೀರೇಶ್ನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಟಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -