Saturday, May 18, 2024
spot_imgspot_img
spot_imgspot_img

ಪರೀಕ್ಷೆ ಬರೆಯಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -
vtv vitla
vtv vitla

ತುಮಕೂರು: ಎಸ್ಸೆಸ್ಸೆಲ್ಸಿ ಎಕ್ಸಾಂ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಸಂಭವಿಸಿದೆ.

ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್​ನ ವಿದ್ಯಾರ್ಥಿ ನವೀನ್(16) ಮೃತ ದುರ್ದೈವಿ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಾದ ನವೀನ್, ಶರತ್, ದರ್ಶನ್ ಸೇರಿ ಮೂವರು ಒಂದೇ ಬೈಕ್​ನಲ್ಲಿ ಅಮೃತೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಜಿನ್ನಾಗರ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಬೈಕ್​, ಡಿವೈಡರ್​ಗೆ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ನವೀನ್​ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾನೆ. ಮತ್ತಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು. ಆಸ್ಪತ್ರೆಗೆ ರವಾನಿಸಲಾಗಿದೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!