- Advertisement -
- Advertisement -



ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್ಮ್ಯಾನ್ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಘಟನೆ ಸಂಬಂಧ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಘಟನೆ ಬಗ್ಗೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








