Sunday, May 5, 2024
spot_imgspot_img
spot_imgspot_img

ದನ ಮೇಯಿಸಲು ಹೋದ ಮಹಿಳೆಯ ಬರ್ಬರ ಹತ್ಯೆ; ಅತ್ಯಾಚಾರ ಶಂಕೆ!

- Advertisement -G L Acharya panikkar
- Advertisement -

ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಛೋಟಾ ಸಾಬರಪಾಳ್ಯ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ಮಹಿಳೆ ಜಯಲಕ್ಷ್ಮೀ(35) ಎನ್ನಲಾಗಿದೆ.

ನಿನ್ನೆ ಬೆಳಿಗ್ಗೆ ಜಯಲಕ್ಷ್ಮೀ ದನ ಮೇಯಿಸಲು ಗ್ರಾಮದ ಬೆಟ್ಟದ ಬಳಿ ಹೋಗಿದ್ದರು. ಈ ವೇಳೆ ಮಹಿಳೆ ಮೇಲೆ ಎರಗಿದ ಕಿರಾತಕರು ಮಹಿಳೆ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕದ್ದಿದ್ದಾರೆ. ಸಂಜೆ 6.45 ಆದರೂ ಪತ್ನಿ ಮನೆಗೆ ಬರದಿದ್ದರಿಂದ ಗಂಡ ಶಿವಕುಮಾರ್ ಪತ್ನಿಯನ್ನು ಹುಡುಕುತ್ತ ಬೆಟ್ಟದ ಬಳಿ ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್!

ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬಗ್ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

driving
- Advertisement -

Related news

error: Content is protected !!