Monday, July 1, 2024
spot_imgspot_img
spot_imgspot_img

ಉಡುಪಿ: ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು : ತಾಯಿ ಗಂಭೀರ

- Advertisement -G L Acharya panikkar
- Advertisement -

ಉಡುಪಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿಯಲ್ಲಿ ಇಂದು ನಡೆದಿದೆ.

ಮೃತ ಮಕ್ಕಳನ್ನು ಸತೀಶ್ ಮಡಿವಾಳ ಹಾಗೂ ಶೀಲಾ ಅವರ ಮಗ ಧನರಾಜ್ ಸತೀಶ್ (13) ಮತ್ತು ಮಗಳು ಛಾಯಾ ಸತೀಶ್ (7) ಎಂದು ಗುರುತಿಸಲಾಗಿದೆ.

ಇದೇ ವೇಳೆ ನೀರಿಗೆ ಬಿದ್ದ ತಾಯಿ ಶೀಲಾ (34) ಸ್ಥಿತಿ ಗಂಭೀರವಾಗಿದ್ದು, ಪ್ರಸ್ತುತ ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆಯೂ ವ್ಯಕ್ತವಾಗಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!