Monday, April 29, 2024
spot_imgspot_img
spot_imgspot_img

ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

- Advertisement -G L Acharya panikkar
- Advertisement -

ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.

ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಮೃತ ದುರ್ದೈವಿಗಳು. ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿಗೆ ಬಿದ್ದು ಮಕ್ಕಳು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸುದ್ದಗುಂಟೆ ಪಾಳ್ಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಶುಕ್ರವಾರವೇ ಮಕ್ಕಳು ನೀರಿನಲ್ಲಿ ಬಿದ್ದಿರುವುದು ಮೃತದೇಹಗಳನ್ನು ಹೊರತೆಗೆದ ಬಳಿಕ ಗೊತ್ತಾಗಿದೆ. ಮಕ್ಕಳು ಕಾಣೆಯಾಗಿರುವ ಬಗ್ಗೆ ತಿಲಕ್‌ ನಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮೃತ ದೇಹಗಳನ್ನು ಹೊರತೆಗೆದ ಬಳಿಕ ತಿಲಕ ನಗರ ಪೊಲೀಸರು ಅನುಮಾನದ ಮೇರೆಗೆ ಬಂದು ನೋಡಿದಾಗ ಮೃತಪಟ್ಟ ಮಕ್ಕಳ ಗುರುತು ಪತ್ತೆಯಾಗಿದೆ.

- Advertisement -

Related news

error: Content is protected !!