- Advertisement -
- Advertisement -


ಕಾಸರಗೋಡು: ಎರಡು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತ ದಲ್ಲಿ ಮೃತಪಟ್ಟ ಘಟನೆ ಆರಿಕ್ಕಾಡಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕುಂಬಳೆ ಬಂಬ್ರಾಣ ಉಜಾರಿನ ಅಜಿತ್ ಶೆಟ್ಟಿ (31) ಎಂದು ಗುರುತಿಸಲಾಗಿದೆ .
ಖತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಅಜಿತ್ ಜೂನ್ 26 ರಂದು ಊರಿಗೆ ಬಂದಿದ್ದರು. ಸೋಮವಾರ ರಾತ್ರಿ ಕುಂಬಳೆ ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮರಳುತ್ತಿದ್ದಾಗ ಆರಿಕ್ಕಾಡಿ ಸಮೀಪ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಅಜಿತ್ ರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತ ಪಟ್ಟರು ಎಂದು ತಿಳಿದುಬಂದಿದೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
- Advertisement -