Monday, April 29, 2024
spot_imgspot_img
spot_imgspot_img

ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು; ಓರ್ವನ ಶವ ಪತ್ತೆ

- Advertisement -G L Acharya panikkar
- Advertisement -

ಈಜಲು ನದಿಗೆ ಇಳಿದ ಕಾರ್ಕಳ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಮತ್ತೂರಿನಲ್ಲಿ ನಡೆದಿದೆ.

ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ(36) ನೀರುಪಾಲಾದ ದುರ್ದೈವಿಗಳು ಎಂದು ತಿಳಿದು ಬಂದಿದೆ.

ತೀರ್ಥಮತ್ತೂರು ಬಳಿ 8-10 ಜನ ಉಪನ್ಯಾಸಕರು ತುಂಗ ನದಿಗೆ ಇಳಿದಾಗ ಓರ್ವ ಉಪನ್ಯಾಸಕ ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಉಪನ್ಯಾಸಕ ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ.

ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ 8 ರಿಂದ 10 ಜನ ಉಪನ್ಯಾಸಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ತುಂಗಾ ನದಿಗೆ ಸ್ನಾನಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು ಮತ್ತೋರ್ವರ ಮೃತದೇಹ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!