Saturday, June 28, 2025
spot_imgspot_img
spot_imgspot_img

ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರು ಮೃತ್ಯು..!

- Advertisement -
- Advertisement -

ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ರೋಣದ ಕೆವಿಜಿ ಬ್ಯಾಂಕಿನಲ್ಲಿ ಪಿಕ್ನಿ ಕಲೆಕ್ಟರ್ ಆಗಿದ್ದ ಮಲ್ಲನಗೌಡ ಲಿಂಗನಗೌಡರ (52) ಹಾಗೂ ಇನ್ನೋರ್ವ ಮೃತಪಟ್ಟಿದ್ದು, ಅವರ ಹೆಸರು, ವಿಳಾಸ ಪತ್ತೆ ಆಗಿಲ್ಲ ಎನ್ನಲಾಗದೆ.

ಪಟ್ಟಣದ ರಾಜ ಬೀದಿಯಲ್ಲಿ ರಥ ಸಾಗುತ್ತಿದ್ದಂತೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಏಕಾಏಕಿ ಚಕ್ರದಡಿಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!