Sunday, June 29, 2025
spot_imgspot_img
spot_imgspot_img

ಚಾಕುವಿನಿಂದ ಇರಿದು ಇಬ್ಬರ ಹತ್ಯೆ..!

- Advertisement -
- Advertisement -

ಇಬ್ಬರು ವ್ಯಾಪಾರಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ಕುಂಬಾರಪೇಟೆಯಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಗಳನ್ನು ಸುರೇಶ್(55) ಹಾಗೂ ಮಹೇಂದ್ರ (68) ಎಂದು ಗುರುತಿಸಲಾಗಿದೆ.

ಕುಂಬಾರ ಪೇಟೆಯ ಹರಿ ಮಾರ್ಕೆಟಿಂಗ್​ನ ಒಳಗೆ ಈ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಭದ್ರ ಎಂಬ ಸಂಬಂಧಿಯಿಂದ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುರೇಶ್ ಹಾಗೂ ಮಹೇಂದ್ರ ಇರೋ ಶಾಪ್​​ಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದಾರೆ. ಇನ್ನು ಇಬ್ಬರನ್ನು ಕೊಲೆ ಮಾಡಿ ಆರೋಪಿ ಭದ್ರ ಪೊಲೀಸರಿಗೆ ಶರಣಾಗಿದ್ದಾನೆ.

ಇನ್ನು ಈ ಘಟನೆ ಬಗ್ಗೆ ಮಾತಾಡಿದ ಕೇಂದ್ರ ವಿಭಾಗದ ಡಿಸಿಪಿ ಶೇಖರ್, ಜೋಡಿ ಕೊಲೆ ಮಾಡಿರೋ ಬಗ್ಗೆ ಮಾಹಿತಿ ಬಂದಿತ್ತು. ಮಹೇಂದ್ರ ಮತ್ತು ಸುರೇಶ್ ಎಂಬುವವರನ್ನ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಅನ್ನೋದು ಪ್ರಾಥಮಿಕವಾಗಿ ತಿಳಿದುಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆ ಮಾಡಿರೋ ಆರೋಪಿ ಮತ್ತು ಕೊಲೆಯಾದವರು ದೂರದ ಸಂಬಂಧಿಕರು. ಆಸ್ತಿ ವಿಚಾರವಾಗಿ ಜಗಳ ನಡೆದಿರೋದು ಗೊತ್ತಾಗಿದೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ ಎಂದಿದ್ದಾರೆ.

- Advertisement -

Related news

error: Content is protected !!