Saturday, June 28, 2025
spot_imgspot_img
spot_imgspot_img

ವಿಟ್ಲ : ವಾಹನ ಅಡ್ಡಗಟ್ಟಿ ಯುವಕರಿಬ್ಬರಿಗೆ ಹಲ್ಲೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ : ವಾಹನ ಅಡ್ಡಗಟ್ಟಿ ಎರಡು ತಂಡಗಳ ಯುವಕರಿಬ್ಬರಿಗೆ ಹಲ್ಲೆ ಮಾಡಿ ಘಟನೆ ಕನ್ಯಾನದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ನಿವಾಸಿ ಮಹಮ್ಮದ್ ಸಯಾಫ್ (25) ಅವರು, ಶುಕ್ರವಾರ ಸಂಜೆ ತನ್ನ ಕಾರಿನಲ್ಲಿ ಸ್ನೇಹಿತರಾದ ರಾಝಿಕ್ ಮತ್ತು ಅಬ್ದುಲ್ ಖಾದ‌ರ್ ಎಂಬವರನ್ನು ಕುಳ್ಳಿರಿಸಿಕೊಂಡು ಕನ್ಯಾನದಿಂದ ತನ್ನ ಮನೆ ಕಡೆಗೆ ಹೋಗುತ್ತಿರುವಾಗ ಕನ್ಯಾನ ಭಜನಾ ಮಂದಿರದ ಬಳಿ ತಲುಪುತ್ತಿದ್ದಂತೆ, ಹಿಂದಿನಿಂದ ಬಿಳಿ ಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದ ಪರಿಚಯದ ಪ್ರಕಾಶ ಹಾಗೂ ಆತನ ಸ್ನೇಹಿತ, ಸಯಾಫ್ ಅವರ ಕಾರನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿ ಪ್ರಕಾಶನು ತನ್ನ ದ್ವಿಚಕ್ರ ವಾಹನದಿಂದ ರಾಡ್ ತೆಗೆದು, ಸಯಾಫ್ ಹಾಗೂ ಸ್ನೇಹಿತ ಅಬ್ದುಲ್ ಖಾದರ್ ಅವರಿಗೆ ಹಲ್ಲೆ ನಡೆಸಿರುತ್ತಾರೆ. ಬಳಿಕ ಪ್ರಕಾಶ ಮತ್ತು ಆತನ ಗೆಳೆಯ ಅವಾಚ್ಯ ಶಬ್ದಗಳಿಂದ ಬೈಯುತ್ತಿರುವಾಗ, ಸ್ಥಳಿಯರು ಸೇರುವುದನ್ನು ಕಂಡ, ಪ್ರಕಾಶ್ ಹಾಗೂ ಆತನ ಸ್ನೇಹಿತ ದ್ವಿಚಕ್ರ ವಾಹನ ಸಮೇತ ಹೋಗಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಸಯಾಫ್ ಹಾಗೂ ಆತನ ಸ್ನೇಹಿತ ಅಬ್ದುಲ್ ಖಾದ‌ರ್ ಅವರು ಚಿಕಿತ್ಸೆಗೆ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 102/2024 ಕಲಂ:341,504,324 R/w 34 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!