Wednesday, May 8, 2024
spot_imgspot_img
spot_imgspot_img

ಉಡುಪಿ: ಈಜಲು ತೆರಳಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

- Advertisement -G L Acharya panikkar
- Advertisement -

ಉಡುಪಿ: ಸ್ನೇಹಿತರ ಜೊತೆಗೆ ಈಜಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದಲ್ಲಿ ನಡೆದಿದೆ.

ಬೆಳಪು ವಸತಿ ಬಡಾವಣೆ ಕಸ್ತೂರಿ ಅವರ ಪುತ್ರ ವಿಶ್ವಾಸ್ ನಾಯಕ್ (11) ಮೃತ ದುರ್ದೈವಿ. ಈತ ಇನ್ನಂಜೆ ಎಸ್‌ಎಸ್ ಆಂಗ್ಲಮಾಧ್ಯಮ ಶಾಲೆಯ ಏಳನೇಯ ತರಗತಿ ವಿದ್ಯಾರ್ಥಿಯಾಗಿದ್ದು, ಗುರುವಾರ ಶಾಲೆಯಿಂದ ಬಂದವನು ಸ್ನೇಹಿತರ ಜೊತೆ ಕೆರೆಗೆ ಈಜಲು ತೆರಳಿದ್ದ.

ಈಜುತ್ತಿದ್ದ ವಿಶ್ವಾಸ್ ಮುಳುಗಿ ಅಸ್ವಸ್ಥನಾಗಿದ್ದನ್ನು ಕಂಡು ಮಕ್ಕಳು ಮೇಲೆ ಬಂದು ಮಹಿಳೆಯೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಸ್ಥಳೀಯರು ಕೆರೆಯಿಂದ ವಿಶ್ವಾಸ್‌ನನ್ನು ಮೇಲಕ್ಕೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ವಿಶ್ವಾಸ್ ನಾಯಕ್ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!