Sunday, May 5, 2024
spot_imgspot_img
spot_imgspot_img

ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಯುವಕನ ಮೇಲೆ ಕೇಸು ದಾಖಲು..!

- Advertisement -G L Acharya panikkar
- Advertisement -

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೋರ್ವ ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಮಾಡಿದ್ದು, ಆತನ ವಿರುದ್ದ ಸುಮೋಟೊ ಕೇಸ್ ದಾಖಲಿಸಲಾಗಿದೆ.

ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಇತ್ತೀಚೆಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಕೊಲೆಗಳ ಆರೋಪಿಯ ಬಗ್ಗೆ”ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು” ಎಂದು ಪೋಸ್ಟ್ ಮಾಡಿದ್ದಾನೆ.

ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧದ ಪೋಸ್ಟ್ ಹಿನ್ನೆಲೆಯಲ್ಲಿ ಈತನ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!