Wednesday, May 8, 2024
spot_imgspot_img
spot_imgspot_img

ಉಡುಪಿ: ಶಾಲೆಯ ರಾತ್ರಿ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

- Advertisement -G L Acharya panikkar
- Advertisement -
vtv vitla

ಉಡುಪಿ: ಖಾಸಗಿ ಶಾಲೆಯ ರಾತ್ರಿ ಕಾವಲುಗಾರರೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಅದಮಾರು ಮಠ ಸಂಚಾಲಿತ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬೆಳಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಯಶೋಧರವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಯವರು 6.30ರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ ಪರ್ಸ್, ನೋಟ್ ಗಳು ಚೆಲ್ಲಿತ್ತು. ಕೆಲವು ನೋಟ್ ಗಳನ್ನು ಹರಿದು ಎಸೆಯಲಾಗಿದ್ದು, ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರಾದ ಸಂತೋಷ್ ಶೆಟ್ಟಿ ಬರ್ಪಾಣಿಯವರು ಆಗಮಿಸಿ ಪಡುಬಿದ್ರಿ ಪೊಲೀಸರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪೊಲೀಸರು ಪರ್ಸನ್ನು ಪರೀಕ್ಷಿಸಿದಾಗ, ಅದರಲ್ಲಿ ಅವರ ಫೋಟೋ ಮತ್ತು ಅದಮಾರು ಸಂಸ್ಥೆಯ ಪತ್ರ ಸಿಕ್ಕಿದೆ. ಇದರಿಂದಾಗಿ ನವೀನ್ ರವರು ಬಾವಿಗೆ ಹಾರಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ದಳದರವರು ಬಾವಿಯಲ್ಲಿದ್ದ ಹುಡುಕಾಡಿದಾಗ ನವೀನ್ ಮೃತದೇಹ ಸಿಕ್ಕಿದ್ದು, ಅದನ್ನು ಹೊರತೆಗೆದಿದ್ದಾರೆ. ಅವಿವಾಹಿತರಾದ ನವೀನ್ ರವರು ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Insta: glacharyajewellers
Fb: glacharya

- Advertisement -

Related news

error: Content is protected !!