Monday, April 29, 2024
spot_imgspot_img
spot_imgspot_img

ಉಡುಪಿ: ಯುವಕ ನೇಣೀಗೆ ಶರಣು..!

- Advertisement -G L Acharya panikkar
- Advertisement -

ಉಡುಪಿ: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೊಬ್ಬ ಮನೆಯ ಹೊರ ಜಗುಲಿಯ ಮೇಲೆ ಇರುವ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ನಗರದ ಕುಕ್ಕಿ ಕಟ್ಟೆಯ ಪರಾಗ್ ವೈನ್ಸ್ ಹಿಂಬದಿಯ ಮನೆಯೊಂದರಲ್ಲಿ ನಡೆದಿದೆ.

ಪ್ರಶಾಂತ್ (22) ಮೃತ ಯುವಕ. ಘಟನೆಯ ಕುರಿತು ಸ್ಥಳೀಯರು ತಕ್ಷಣ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಒಳಕಾಡು ಸ್ಥಳಕ್ಕೆ ಬಂದು ನೋಡುವಾಗ ಯುವಕ ನರಳುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ. ತಕ್ಷಣ ಅವರು ಯುವಕನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಆತನನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!