- Advertisement -
- Advertisement -
ಉಡುಪಿ: ಬೈಕ್ ಮತ್ತು ಬೈಕ್ ಮುಖಾ ಮುಖೀ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ಕಾಪುವಿನ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟ ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್ ವರ್ಕ್ಸ್ ಕಾರ್ಮಿಕ ಮಲ್ಲೇಶ್ (53) ಹಾಗೂ ಗಾಯಗೊಂಡ ಬೈಕ್ ಸವಾರ ಜಯನ್ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮತ್ತು ಉಳಿಯಾರಗೋಳಿ ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಹೋಂಡಾ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಕೊಂಡಿದೆ. ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಮಲ್ಲೇಶ್ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆಗೆ ತೀವ್ರ ಗಾಯಗಳುಂಟಾಗಿತ್ತು. ಸವಾರ ಜಯನ್ ಕಾಲು ಮುರಿತಕ್ಕೊಳಗಾಗಿದ್ದು ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಮಲ್ಲೇಶ್ ಮೃತಪಟ್ಟಿದ್ದಾರೆ. ಪಲ್ಸರ್ ಬೈಕ್ ಸವಾರ ಶ್ರೀನಿವಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -