- Advertisement -
- Advertisement -
ಉಡುಪಿ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಆರೂರಿನ ರಾಕೇಶ್ ಎಂದು ಗುರುತಿಸಲಾಗಿದೆ.
ಆರೂರಿನ ರಾಕೇಶ್ ಎಂಬವರು ಸ್ಕೂಟರ್ನಲ್ಲಿ ಜೋಡುಕಟ್ಟೆಯಿಂದ ಬ್ರಹ್ಮಗಿರಿ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕಿ ರಮಿತಾ ತನ್ನ ಕಾರನ್ನು ಬ್ರಹ್ಮಗಿರಿ ಕಡೆಯಿಂದ ಚಲಾಯಿಸಿಕೊಂಡು ಬಂದು ಹುತಾತ್ಮರ ಸ್ಮಾರಕದ ಬಳಿ ಹಠಾತ್ ಯು ಟರ್ನ್ ಮಾಡಿದ ಪರಿಣಾಮ ಸ್ಕೂಟರ್ ಸವಾರ ಬಿದ್ದು ಗಾಯಗೊಂಡರು. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
- Advertisement -