Saturday, April 20, 2024
spot_imgspot_img
spot_imgspot_img

ಉಡುಪಿ: ಕಂದಕಕ್ಕೆ ಉರುಳಿದ ಕಾರು – ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜು

- Advertisement -G L Acharya panikkar
- Advertisement -

ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ.

ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ. 5 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪೂರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ.

ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ. ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!