Saturday, June 28, 2025
spot_imgspot_img
spot_imgspot_img

ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮಾರಣಾಂತಿಕವಾಗಿ‌ ಹಲ್ಲೆ!

- Advertisement -
- Advertisement -

ಬ್ರಹ್ಮಾವರ : ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮಾರಣಾಂತಿಕವಾಗಿ‌ ಹಲ್ಲೆ‌ ನಡೆಸಿದ‌ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮ ಸಮೀಪದ ಪಾರಂಪಳ್ಳಿ ಪಡುಕೆರೆಯಲ್ಲಿ ನಡೆದಿದೆ.


ಹಲ್ಲೆಗೊಳಗಾದವನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಲಿ ನಿವಾಸಿ ಅಕ್ಷಯ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅಕ್ಷಯ್ ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಹಲ್ಲೆ‌‌ ನಡೆಸಿದಾತನನ್ನು ಶಂಭು ಪೂಜಾರಿ ಅವರ ಮಗ ಗಗನ್ ಪೂಜಾರಿ ಎಂದು ತಿಳಿದುಬಂದಿದೆ.

ಕ್ಷುಲಕ ಕಾರಣಕ್ಕೆ ಕಾರಣಕ್ಕೆ ಆರೋಪಿ ಗಗನ್ ಹಾಗೂ ಅಕ್ಷಯ್ ನಡುವೆ ಮೊಬೈಲ್ ನಲ್ಲಿ ಪರಸ್ಪರ ಗಲಾಟೆ ನಡೆದಿತ್ತು. ರಾತ್ರಿಯ ವೇಳೆಯಲ್ಲಿ ಕೋಟದ ಹೋಟೆಲ್ ನಲ್ಲಿ ಊಟ ಮುಗಿಸಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿದ ಗಗನ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆಯೊಡ್ಡಿದ್ದಾನೆ.

ನಂತರ ಗಗನ್ ಅಕ್ಷಯ್ ತಲೆಯ ಹಿಂಬದಿಗೆ ಕಬ್ಬಿಣದ ರಾಡ್ ನಿಂದ ಬಲವಾಗಿ ಹೊಡೆದು ಮಾರಣಾಂತಿಕವಾಗಿ ಹಲ್ಲೆ‌ ನಡೆಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಶ್ರಾವದಿಂದ ನೆಲಕ್ಕುರುಳಿದ್ದಅಕ್ಷಯನನ್ನು ಚೇತನ್ ಹಾಗೂ ಸ್ನೇಹಿತರು‌ ಆರೋಪಿಯ ತಂದೆ ಶಂಭು ಪೂಜಾರಿ ಅವರ ಕಾರಿನಲ್ಲಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಗಗನ್ ಪೂಜಾರಿ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 36/2021 ಕಲಂ: 341, 326, 504, 506 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಬಲೆ‌ ಬೀಸಿದ್ದಾರೆ.

- Advertisement -

Related news

error: Content is protected !!