- Advertisement -
- Advertisement -
ಉಡುಪಿ: ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ರಿಕ್ಷಾ ಚಾಲಕರೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಇಲ್ಲಿನ ಕುಕ್ಕಿಕಟ್ಟೆ ನಿವಾಸಿಯಾಗಿದ್ದ 28 ವರ್ಷದ ಸುನಿಲ್. ಕೆ ಎಂದು ಗುರುತಿಸಲಾಗಿದೆ.
ಇವರು ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ತಮ್ಮ ಮನೆಯಲ್ಲಿ ಇಲಿ ಪಾಷಾಣವನ್ನು ಸೇವಿಸಿ ಅಸ್ವಸ್ಥರಾಗಿದ್ದರು. ಇವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
- Advertisement -