ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು 2016 ರಲ್ಲಿ ಹತ್ಯೆಗೈದ ಪ್ರಕರಣದಲ್ಲಿ ಆರೋಪಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಸಂತ್ರಸ್ತೆಯ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿಯವರ ಹತ್ಯೆ ನಡೆಸಿದ್ದರು ಎಂಬ ಆರೋಪವಿದೆ. ಅದರೊಂದಿಗೆ ಆತ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂದು ಆರೋಪಿಸಲಾಗಿತ್ತು.ಭಾಸ್ಕರ್ ಶೆಟ್ಟಿ ಅವನನ್ನು ಕೊಲೆ ಮಾಡಿ ದೇಹವನ್ನು ‘ಹೋಮಾ ಕುಂಡ’ದಲ್ಲಿ ಸುಟ್ಟುಹಾಕಿದ್ದಾರೆ ಎಂಬ ಆರೋಪಗಳು ಕೂಡ ಆರೋಪಿಗಳ ಮೇಲಿದೆ.
ಸರ್ವೊಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣ್ಯಂ ಅವರನ್ನೊಳಗೊಂಡ ನ್ಯಾಯಪೀಠವು ಜಾಮೀನು ಅರ್ಜಿಯ ಕುರಿತು ಎರಡು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸರ್ವೊಚ್ಚ ನ್ಯಾಯಾಲಯದ ಕದ ತಟ್ಟಿದ್ದರು.ಹೈಕೋರ್ಟ್ ಜಾಮೀನು ಮನವಿಯನ್ನು ವಜಾಗೊಳಿಸಿ ಕೆಲವು ವಸ್ತು ಸಾಕ್ಷಿಗಳನ್ನು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ ಇದು ಆರು ತಿಂಗಳು ತೆಗೆದುಕೊಳ್ಳುತ್ತದೆ. ಅದರ ನಂತರ ತಮ್ನ ಮನವಿಯ ಅರ್ಜಿ ಸಲ್ಲಿಸಲು ಭಟ್ ಅವರಿಗೆ ಉಚ್ಚ ನ್ಯಾಯಾಲಯ ನಿರ್ದೇಶಿಸಿತ್ತು.
ಆರೋಪಿಗಳ ನಿದರ್ಶನದಲ್ಲಿ ಕೆಲವು ಸಾಕ್ಷಿಗಳನ್ನು ಪರಿಶೀಲನೆ ನಡೆಸಲಾಗಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರನ್ನು ಮತ್ತೊಮ್ಮೆ ಮರು ಪರಿಶೀಲನೆ ನಡೆಸಬೇಕೆಂದು ನ್ಯಾಯಾಲಯ ಹೇಳಿತ್ತು.ಈಗಾಗಲೇ ಕೊಲೆಯಾದ ಭಾಸ್ಕರ್ ಶೆಟ್ಟಿ ಅವರ ಪತ್ನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಭಾಸ್ಕರ್ ಶೆಟ್ಟಿಯವರನ್ನು ಇಂದ್ರಾಳಿಯಲ್ಲಿರುವ ಅವರ ನಿವಾಸದಲ್ಲಿ ಅಮಾನುಷವಾಗಿ ಕೊಲ್ಲಲಾಯಿತು ಮತ್ತು ನಂತರ ಅವರ ದೇಹವನ್ನು ನಂದಳಿಕೆಯಲ್ಲಿರುವ ಜ್ಯೋತಿಷಿ ನಿರಂಜನ್ ಭಟ್ ಅವರ ಮನೆಯ ಹೋಮಾ ಕುಂಡದಲ್ಲಿ ಸುಟ್ಟುಹಾಕಲಾಗಿತ್ತು. ಈ ಕೊಲೆ ಕರಾವಳಿ ಪ್ರದೇಶದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು.
ಭಾಸ್ಕರ್ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದ ಪ್ರಮುಖ ಆರೋಪಿಗಳು. ಸಾಕ್ಷಿ ನಾಶಕ್ಕಾಗಿ ಬಂಧಿಸಲ್ಪಟ್ಟ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ್ ಭಟ್ ಮತ್ತು ಚಾಲಕ ರಾಘವೇಂದ್ರ ಜಾಮೀನಿನ ಮೇಲೆ ಹೊರಬಂದಿದ್ದಾರೆ.