- Advertisement -
- Advertisement -



ಉಡುಪಿ: ರಸ್ತೆ ದಾಟುವ ವೇಳೆ ವ್ಯಕ್ತಿಯೋರ್ವರಿಗೆ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ಪದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲು ಪಾಡಿಗಾರ ಎಂಬಲ್ಲಿ ನಡೆದಿದೆ.
ಮೃತರನ್ನು ಗೋವಿಂದ (50) ಹಾಗೂ ಬುಲೆಟ್ ಸವಾರ ದರ್ಶಿತ್ ಎಂದು ಗುರುತಿಸಲಾಗಿದೆ.
ಮನೆಯ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಗೋವಿಂದ ಅವರಿಗೆ ಕಲ್ಸಂಕ ಕಡೆಯಿಂದ ಗುಂಡಿಬೈಲ್ ಕಡೆಗೆ ಹೋಗುತ್ತಿದ್ದ ಬುಲೆಟ್ ಢಿಕ್ಕಿ ಹೊಡೆಯಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೋವಿಂದ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಲೆಟ್ ಸವಾರ ದರ್ಶಿತ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪಕ್ರರಣ ದಾಖಲಿಸಲಾಗಿದೆ.
- Advertisement -