Saturday, June 28, 2025
spot_imgspot_img
spot_imgspot_img

ಉಡುಪಿ: ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು..!

- Advertisement -
- Advertisement -

ಉಡುಪಿ: ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಎಂಬಿಎ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯಬ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ.

ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರು ಚಾಲಕ ಮೊದಲು ಗೂಡ್ಸ್ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಲ್ಲಿ ಸಂಕೀರ್ತನ್ ರಸ್ತೆಗೆ ಬಿದ್ದು ತೀವು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!