




ಉಡುಪಿ: ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿಯ ಕುಣಿಜಿಬೆಟ್ಟುವಿನ ಎಂಜಿಎಂ ಕಾಲೇಜು ಬಳಿ ನಡೆದಿದೆ.
ಮೃತರನ್ನು ಹಿರಿಯಡ್ಕ ನಿವಾಸಿ ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ.
ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಯಿಂದ ತಾತ್ಕಾಲಿಕವಾಗಿ ಸಂಚಾರ ವ್ಯತ್ಯಯವಾಗಿದೆ. ಉಡುಪಿ ಕಡೆಯಿಂದ ಬರುವ ವಾಹನಗಳ ಸಂಚಾರವನ್ನು ಮಣಿಪಾಲ ಕಡೆಗೆ ತಿರುಗಿಸಲಾಗಿದ್ದು, ಒಂದು ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಉಡುಪಿಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ವೀರಜ್ ಬೈಕ್ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪರಿಣಾಮ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರದಿಗಳು ತಿಳಿಸಿವೆ. ಹೆಚ್ಚಿನ ತನಿಖೆಗಾಗಿ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.