- Advertisement -
- Advertisement -


ಉಡುಪಿ: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ನಲ್ಲಿ ನಡೆದಿದೆ.
ಮೃತರನ್ನು ಬ್ರಹ್ಮಾವರ ಎಸ್ಎಂಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ವಂಶಿ ಜಿ ಶೆಟ್ಟಿ (11) ಎಂದು ಗುರುತಿಸಲಾಗಿದೆ.
ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಬೇಸಿಗೆ ಕ್ರೀಡಾ ಶಿಬಿರ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಂಶ್ ಶೆಟ್ಟಿ ಶಾಲೆಗೆ ಹೋಗಲು ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿದ್ದನು. ಈ ವೇಳೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು, ರಸ್ತೆಯ ತೀರಾ ಎಡಭಾಗಕ್ಕೆ ಬಂದು ವಂಶ್ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ತೀವ್ರ ಸ್ವರೂಪದ ರಕ್ತಗಾಯಗೊಂಡ ವಂಶ್ ಶೆಟ್ಟಿಯನ್ನು ಕೂಡಲೇ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -