Sunday, June 29, 2025
spot_imgspot_img
spot_imgspot_img

ಉಡುಪಿ: ಮನೆಯಲ್ಲಿ ಅಗ್ನಿ ಅವಘಡ; ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಮೃತ್ಯು..!

- Advertisement -
- Advertisement -

ಉಡುಪಿ: ನಿನ್ನೆ ನಸುಕಿನ ವೇಳೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಇಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಸೋಮವಾರ ಮುಂಜಾನೆ ವೇಳೆ ಅಗ್ನಿ ಅವಘಡ ಸಂಭವಿಸಿದೆ. ನಗರದ ಅಂಬಲಪಾಡಿಯಲ್ಲಿರುವ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿಗೆ ಗಂಭೀರ ಗಾಯಗಳಾಗಿದ್ದವು. ಇಬ್ಬರಿಗೂ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ರಮಾನಂದ ಶೆಟ್ಟಿಯವರು ನಿನ್ನೆಯೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪತ್ನಿ ಇಂದು ಕೊನೆಯುಸಿರೆಳೆದಿದ್ದಾರೆ.

ಮನೆಯ ಸೆಂಟ್ರಲೈಸ್ಟ್ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಮನೆಗೆ ಬೆಂಕಿ ಹತ್ತಿಕೊಂಡಿತ್ತು. ಹೊಗೆ ಶ್ವಾಸಕೋಶ ಹಾಗೂ ಮೆದುಳಿನ ಒಳಗೆ ಹೋದ ಕಾರಣ ಉಸಿರಾಡಲು ಕಷ್ಟವಾಗಿ ದಂಪತಿ ಸಾವನ್ನಪ್ಪಿದ್ದಾರೆ. ಮಕ್ಕಳು ಮೇಲಿನ ಮಹಡಿಯಲ್ಲಿ ಮಲಗಿದ್ದ ಕಾರಣ ಅದೃಷ್ಟವಶಾತ್ ಪಾರಾಗಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಗೆ ಒಳಗಿನಿಂದ ಬೀಗ ಹಾಕಿದ್ದ ಕಾರಣ ಬಾಗಿಲು ತೆಗೆಯಲು ಹರಸಾಹಸ ಪಡಬೇಕಾಯಿತು. ಈ ಕಾರಣಕ್ಕೆ ಪರಿಹಾರ ಕಾರ್ಯಾಚರಣೆ ವಿಳಂಬವಾಗಿತ್ತು. ಮನೆಯೊಳಗಿನ ವಸ್ತುಗಳೆಲ್ಲ ಸುಟ್ಟು ಕರಕಲಾಗಿದ್ದು, ದುರಂತದ ತೀವ್ರತೆಗೆ ಸಾಕ್ಷಿ ನುಡಿಯುತ್ತಿವೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!