Sunday, June 29, 2025
spot_imgspot_img
spot_imgspot_img

ಉಡುಪಿ: ಚಿನ್ನದ ಸರ ಕಳ್ಳತನ ಪ್ರಕರಣ; ಓರ್ವನ ಬಂಧನ..!

- Advertisement -
- Advertisement -

ಉಡುಪಿ: ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಮಣಿಪಾಲದ ಸರಳೆಬೆಟ್ಟು ನಿವಾಸಿ ಸಂತೋಷ್ (29) ಎಂದು ಗುರುತಿಸಲಾಗಿದೆ.

ಮಾರ್ಚ್ 29 ರಂದು ದೂರುದಾರರು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿತ್ತು. ಮಣಿಪಾಲದ ಖಾಸಗಿ ಕಾಲೇಜಿನ ಬಳಿ, ಆರೋಪಿಗಳು ಆಕೆಯನ್ನು ಹಿಂಬಾಲಿಸಿ, ಆಕೆಯ ಕುತ್ತಿಗೆಯಿಂದ, ಬಲವಂತವಾಗಿ 45 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ಸ್‌ಪೆಕ್ಟರ್ ದೇವರಾಜ್ ಟಿವಿ, ಎಎಸ್‌ಐ ವಿವೇಕ್, ಹೆಡ್ ಕಾನ್‌ಸ್ಟೆಬಲ್ ಪ್ರಸನ್ನ, ಕಾನ್‌ಸ್ಟೆಬಲ್‌ಗಳಾದ ಮಂಜುನಾಥ್ ಮತ್ತು ರವಿರಾಜ್ ಅವರನ್ನೊಳಗೊಂಡ ಪೊಲೀಸ್ ತಂಡ ಏಪ್ರಿಲ್ 3 ರಂದು ಶ್ವಾನ ದಳದ ಸಹಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ. ಸುಮಾರು 3.5 ಲಕ್ಷ ರೂ. ಮೌಲ್ಯದ ಕದ್ದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮುಂದಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!