- Advertisement -
- Advertisement -





ಉಡುಪಿ: ಐಪಿಎಲ್ನ ಫೈನಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ರಾತ್ರಿ ಕ್ರಿಕೆಟ್ ಬೆಟ್ಟಿಂಗ್ ಕಟ್ಟಿದ ಆರೋಪದ ಮೇಲೆ ಕೋಟ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂದಾಪುರ ತಾಲೂಕಿನ ಮಂಡಳ್ಳಿ ಗ್ರಾಮದ ಹಾರ್ದಳ್ಳಿಯ ಶಿವರಾಜ್(32) ಮತ್ತು ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಪ್ರದೀಪ (37) ಎಂದು ಗುರುತಿಸಲಾಗಿದೆ.
ಜೂನ್ 3 ರಂದು ರಾತ್ರಿ 10 ಗಂಟೆ ವೇಳೆಗೆ ಶಿರಿಯಾರ ಗ್ರಾಮದ ಸಾಯ್ಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಮೊಬೈಲ್ ಫೋನ್ ಹಿಡಿದುಕೊಂಡು RCB ಮತ್ತು PBKS ಎಂದು ಹೇಳಿ ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮುಖಾಂತರ ಚಂದ್ರ ಜನ್ನಾಡಿ ಎಂಬಾತನ ಜತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ App Online ಮೂಲಕ ಈ ಇಬ್ಬರು ಆರೋಪಿಗಳು ಆಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಆರೋಪಿಗಳಿಂದ ಕ್ರಿಕೆಟ್ ಬೆಟ್ಟಿಂಗ್ಗೆ ಬಳಸಿದ 3 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
- Advertisement -