Sunday, June 29, 2025
spot_imgspot_img
spot_imgspot_img

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ; ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

- Advertisement -
- Advertisement -

ಉಡುಪಿ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಬ್ಯಾಂಕ್ ಮ್ಯಾನೇಜರ್‌ಗೆ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಆಫ್‌ ಬರೋಡ ದೊಂಡ್ಡೆರಂಗಡಿ ಅಜೆಕಾರು ಶಾಖೆಯ ಮ್ಯಾನೇಜರ್ ಆಂಧ್ರಪ್ರದೇಶ ಮೂಲದ ಪವನ್ ಕುಮಾರ್ (35) ಎಂಬವರಿಗೆ ಅಪರಿಚಿತರು ಟ್ರೇಡಿಂಗ್ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದು ಗ್ರೂಪ್‌ನಲ್ಲಿ ಅಪರಿಚಿತ ವ್ಯಕ್ತಿ ಅವರಿಗೆ ಶೇರು ಮಾರುಕಟ್ಟೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿದ್ದರು.

ಅದನ್ನು ನಂಬಿದ ಪವನ್ ಕುಮಾರ್, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆಯಿಂದ ಆ್ಯಪ್ ಮೂಲಕ ಹಣವನ್ನು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಅ.7ರಿಂದ ಅ.19ರ ತನಕ ಹಂತ ಹಂತವಾಗಿ ಒಟ್ಟು 14,00,000 ರೂ. ಹಣವನ್ನು ಹೂಡಿಕೆ ಮಾಡಿದ್ದರು. ತದನಂತರ ಪವನ್ ಕುಮಾರ್ ಹೂಡಿಕೆ ಮಾಡಿದ ಹಣವನ್ನಾಗಿ ಅಥವಾ ಲಾಭಾಂಶವನ್ನಾಗಲಿ ಈವರೆಗೆ ನೀಡದೇ ನಂಬಿಸಿ, ವಂಚಿಸಿರುವುದಾಗಿ ದೂರಲಾಗಿದೆ.

- Advertisement -

Related news

error: Content is protected !!