Monday, May 20, 2024
spot_imgspot_img
spot_imgspot_img

ಉಡುಪಿ: ಬಾವಿ ಸ್ವಚ್ಛತೆಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವು,ಮತ್ತೋರ್ವನ ರಕ್ಷಣೆ..!

- Advertisement -G L Acharya panikkar
- Advertisement -

ಉಡುಪಿ: ಕೆಸರು ತೆಗೆದು ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವನ್ನಪ್ಪಿದ್ದು,ಮತ್ತೋರ್ವನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ದುರ್ಗೇಶ್ (34) ಹಾಗೂ ರಕ್ಷಣೆಗೊಳಗಾದ ವ್ಯಕ್ತಿ ಅಡಿವೆಪ್ಪ ಕುರಿ (50) ಎಂದು ಗುರುತತಿಸಲಾಗಿದೆ.

ಇಬ್ಬರು ಕೂಡ ಕೊಪ್ಪಳ ಜಿಲ್ಲೆಯವರಾಗಿದ್ದು, ಬ್ರಹ್ಮಾವರದ ಸಾಲಿಕೆರೆಯಲ್ಲಿ ವಾಸಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. 35 ಅಡಿ ಆಳದ ಬಾವಿಯಲ್ಲಿ ಕೆಸರು ಇದೆ ಎಂದು ಬಾವಿಯೊಳಗೆ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛ ಮಾಡುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಆಮ್ಲಜನಕ ಕೊರತೆಯಾಗಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!